ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಸಮುದಾಯದವರೂ ಹೋಗುತ್ತಾರೆ: ದಸರಾ ಧಾರ್ಮಿಕ ಆಚರಣೆಯಲ್ಲ, ಸಾಂಸ್ಕೃತಿಕ ಆಚರಣೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಾನು ಮುಸ್ತಾಕ್ ಚಾಮುಂಡುಬೆಟ್ಟ ಹತ್ತುವಂತಿಲ್ಲ ಎಂದಿದ್ದರು.

ಶೋಭಾ ಕರಂದ್ಲಾಜೆ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಚಾಮುಂಡಿಬೆಟ್ಟ ಕೇವಲ ಹಿಂದೂಗಳ ಆಸ್ತಿಯಲ್ಲ. ಎಲ್ಲಾ ಸಮುದಾಯದವರೂ ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ ಎಂದಿದ್ದಾರೆ.

ಹಿಂದೂಗಳು ಮಸೀದಿ, ಚರ್ಚ್, ಗುರುದ್ವಾರಕ್ಕೆ ಹೋಗುತ್ತಾರೆ. ರಾಮಮಂದಿರಕ್ಕೆ ಹಿಂದೂಗಳಷ್ಟೇ ಬರಬೇಕು ಎಂದು ಯಾಕೆ ಬೋರ್ಡ್ ಹಾಕಿಲ್ಲ. ದಸರಾ ಸಾಂಸ್ಕೃತಿಕ ಆಚರಣೆ. ಧಾರ್ಮಿಕ ಆಚರಣೆಯಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read