ರಾಯಚೂರು: ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಗಣಪತಿ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನರಸಿಂಹ(22) ಮೃತಪಟ್ಟ ಯುವಕ. ಹನುಮಾಪುರ ಸಮೀಪ ರಾಜೊಳ್ಳ ಬಂಡಾ ಕಾಲುವೆಯಲ್ಲಿ ಗಣಪತಿ ವಿಸರ್ಜಿಸಲು ಬೊಲೆರೋ ಪಿಕಪ್ ವಾಹನದಲ್ಲಿ ಮೆರವಣಿಗೆ ಸಾಗುತ್ತಿತ್ತು. ಗಣಪತಿಯನ್ನು ಹಿಡಿದು ಕುಳಿತಿದ್ದ ನರಸಿಂಹನಿಗೆ ವಿದ್ಯುತ್ ಸ್ಪರ್ಶಿಸಿದೆ. ಇದೇ ವೇಳೆ ವಾಹನದಲ್ಲಿದ್ದ ಯುವಕರು ಕೂಡಲೇ ಕೆಳಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆಯ ನಡುವೆಯೇ ಗಣಪತಿ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಯರಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.