BREAKING: ರಾಜ್ಯದಲ್ಲಿ ಗ್ರಾಮಪಂಚಾಯಿತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ: ಚುನಾವಣಾ ಆಯೋಗ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ ಎಂದು ರಾಜ್ಯ ಚುನಾವಣಾ ಆಯೋಗದಿಂದ ಸ್ಪಷ್ಟನೆ ನೀಡಲಾಗಿದೆ.

ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿ ಪ್ರಕಟಿಸಿರುವುದಿಲ್ಲ. ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣೆಯ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read