BIG NEWS: ಧರ್ಮಸ್ಥಳ ಪ್ರಕರಣ: ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರೇ ಷಡ್ಯಂತ್ರ ನಡೆಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಬಿಜೆಪಿಯವರಿಗೆ ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ತಿರುಗೇಟು ನೀಡಿದರು.

ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ಆರೋಪಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read