ಕೆಟ್ಟ ಬಸ್ ದುರಸ್ತಿಗೂ ದುಡ್ಡಿಲ್ಲ; ಈಗ ಸರ್ಕಾರ ಹೆಲಿಕಾಪ್ಟರ್ ಖರೀದಿಗೆ ಮುಂದಾಗಿದ್ದು ‘ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ’ಎಂಬಂತಿದೆ: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಿಗೆ ಸಿಎಂ, ಡಿಸಿಎಂ, ಸಚಿವರು ತೆರಳಲು ಹೆಲಿಕಾಪ್ಟರ್ ಖರೀದಿಗೆ ಸರ್ಕಾರ ಮುಂದಾಗಿದೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ” ಎನ್ನುವಂತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆ ಎಂದು ವ್ಯಂಗ್ಯವಾಡಿದ್ದಾರೆ.

ನಡು ರಸ್ತೆಯಲ್ಲಿ ಕೆಟ್ಟು ನಿಲ್ಲುತ್ತಿರುವ ಸರ್ಕಾರಿ ಬಸ್ಸುಗಳ ದುರಸ್ತಿಗೆ ಕಾಂಗ್ರೆಸ್ ಸರ್ಕಾರದ ಬಳಿ ದುಡ್ಡಿಲ್ಲ. ಹೊಸ ಬಸ್ಸುಗಳ ಖರೀದಿಗೆ ದುಡ್ಡಿಲ್ಲ. ಸಾರಿಗೆ ನೌಕರರಿಗೆ ಸಿಗಬೇಕಾದ ನೂರಾರು ಕೋಟಿ ಹಿಂಬಾಕಿ ಪಾವತಿಸಲು ದುಡ್ಡಿಲ್ಲ. ಯಾವುದಕ್ಕೂ ದುಡ್ಡಿಲ್ಲ, ದುಡ್ಡಿಲ್ಲ ಎಂದು ಸಾರಿಗೆ ನಿಗಮಗಳನ್ನು ಸರ್ವನಾಶ ಮಾಡಿ ಬಸ್ ನಿಲ್ದಾಣಗಳನ್ನು ಹರಾಜು ಹಾಕುವ ದುಸ್ಥಿತಿ ತಂದಿಟ್ಟಿರುವ ದಿವಾಳಿ ಕಾಂಗ್ರೆಸ್ ಈಗ ಸ್ವಂತ ಹೆಲಿಕಾಪ್ಟರ್, ಜೆಟ್ ಖರೀದಿ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಮತ್ತು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ.

ಸಾರ್ವಜನಿಕರಿಗೆ ಕನಿಷ್ಠ ಸೌಕರ್ಯ ನೀಡುವುದಕ್ಕಿಂತ ಮುಖ್ಯಮಂತ್ರಿಗಳು, ಸಚಿವರ ಐಷಾರಾಮಿ ಶೋಕಿಯೇ ಮುಖ್ಯವಾಗಿರುವ ಈ ಕಾಂಗ್ರೆಸ್ ಸರ್ಕಾರದ ಲಜ್ಜೆಗೆಟ್ಟ ಧೋರಣೆಗೆ ಕನ್ನಡಿಗರು ರೋಸಿ ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read