ನೋಟಿಸ್ ಕೊಡಲು ಬಂದ ಕೋರ್ಟ್ ಅಮೀನ್ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ…!

ಮಂಡ್ಯ: ಕೋರ್ಟ್ ಅಮೀನ್ ಕಣ್ಣಿಗೆ ಮಹಿಳೆ ಖಾರದಪುಡಿ ಎರಚಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ.

ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಬಂದಿದ್ದ ಅಮೀನ್ ಗೆ ಖಾರದಪುಡಿ ಎರಚಲಾಗಿದೆ. ಕೆಆರ್ ಪೇಟೆ ಪಟ್ಟಣದ ಸಿವಿಲ್ ಕೋರ್ಟ್ ಅಮೀನ್ ಶಂಕರೇಗೌಡ ಕಣ್ಣಿಗೆ ಸಾಕಮ್ಮ ಖಾರದ ಪುಡಿ ಎರಚಿದ್ದಾರೆ.

ಪೊಲೀಸರಿಗೂ ಮಾಹಿತಿ ನೀಡದೇ ಅಮೀನ್ ಸ್ಥಳಕ್ಕೆ ಹೋಗಿದ್ದರು. ಚಿಕ್ಕಮಗಳೂರಿನಲ್ಲಿ ನಡೆದ ಅಪಘಾತ ಪ್ರಕರಣ ಸಂಬಂಧ ನೋಟಿಸ್ ಕೊಡಲು ಹೋಗಿದ್ದರು. ವಾಹನ ಮಾಲೀಕನ ಜೊತೆಗೆ ನೇರವಾಗಿ ಕೋರ್ಟ್ ಅಮೀನ್ ತೆರಳಿದ್ದರು. ಸದ್ಯ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಖಾರದಪುಡಿ ಎರಚುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read