BREAKING: ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸ್: ಬಂಧಿತ 22 ಮಂದಿಗೆ 14 ದಿನ ನ್ಯಾಯಾಂಗ ಬಂಧನ

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕು ಕೋರ್ಟ್ ನಿಂದ ಆದೇಶ ಹೊರಡಿಸಲಾಗಿದೆ. ಬಂಧಿತ 22 ಆರೋಪಿಗಳನ್ನು ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಎರಡನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ. ಎಲ್ಲ 22 ಆರೋಪಿಗಳನ್ನು ಮಂಡ್ಯ ಜೈಲಿಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read