ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ (ಸೆಪ್ಟೆಂಬರ್ 9) ರಂದು ಪ್ರವಾಹ ಪೀಡಿತ ಹಿಮಾಚಲ ಪ್ರದೇಶ ಮತ್ತು ಪಂಜಾಬ್ಗೆ ಭೇಟಿ ನೀಡಲಿದ್ದು, ವಾರಗಟ್ಟಲೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರದ ಹಲವಾರು ರಾಜ್ಯಗಳಲ್ಲಿ ಹಾನಿ ಸಂಭವಿಸಿದ್ದು, ಮಳೆಯಿಂದ ಉಂಟಾದ ಹಾನಿ ಮತ್ತು ಪುನರ್ವಸತಿ ಪ್ರಯತ್ನಗಳನ್ನು ಪರಿಶೀಲಿಸಲಿದ್ದಾರೆ.
ಪ್ರಧಾನಿ ಮೋದಿ ಮೊದಲು ಮಧ್ಯಾಹ್ನ 1:30 ರ ಸುಮಾರಿಗೆ ಹಿಮಾಚಲ ಪ್ರದೇಶದ ಕಾಂಗ್ರಾಗೆ ಆಗಮಿಸಲಿದ್ದಾರೆ, ಅಲ್ಲಿ ಅವರು ಹೆಚ್ಚು ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ವರದಿಯಾಗಿದೆ. ಅವರು ಧರ್ಮಶಾಲಾದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ಆಪ್ಡಾ ಮಿತ್ರ ತಂಡಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸುವ ಮತ್ತು ಪ್ರವಾಹ ಪೀಡಿತರೊಂದಿಗೆ ಸಂವಹನ ನಡೆಸುವ ನಿರೀಕ್ಷೆಯಿದೆ.
ಕಾಂಗ್ರಾ ವಿಮಾನ ನಿಲ್ದಾಣದ ನಿರ್ದೇಶಕ ಧೀರೇಂದ್ರ ಸಿಂಗ್ ಸುದ್ದಿ ಸಂಸ್ಥೆ ಮಾಹಿತಿ ನೀಡಿ, ಹಿಮಾಚಲ ರಾಜ್ಯಪಾಲ ಶಿವ ಪ್ರತಾಪ್ ಶುಕ್ಲಾ, ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಇತರ ಗಣ್ಯರು ಪ್ರಧಾನಿಯವರು ವಿಮಾನ ನಿಲ್ದಾಣದ ಆವರಣದಲ್ಲಿ ಕರೆಯುವ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. “ನಾವು ಅಗತ್ಯವಿರುವ ಎಲ್ಲ ರೀತಿಯಲ್ಲಿ ತಯಾರಿ ನಡೆಸುತ್ತಿದ್ದೇವೆ… ಈ ಕಾರ್ಯಕ್ರಮಕ್ಕಾಗಿ ನಾವು ಯಾವುದೇ ವಿಮಾನಗಳನ್ನು ರದ್ದುಗೊಳಿಸುತ್ತಿಲ್ಲ, ನಾವು ಕೆಲವನ್ನು ಮಾತ್ರ ಮರು ನಿಗದಿಪಡಿಸಿದ್ದೇವೆ” ಎಂದು ಅವರು ಹೇಳಿದರು.