ರಾಜ್ಯದ ರೈತರಿಗೆ ಗುಡ್ ನ್ಯೂಸ್: ಬೆಳೆ ನಷ್ಟ ಪರಿಹಾರ ಹೆಚ್ಚಳ: ಸಿಎಂ ಘೋಷಣೆ

ಬೆಂಗಳೂರು: ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಐದು ವರ್ಷದ ಬಳಿಕ ಪರಿಹಾರಧನ ಪರಿಷ್ಕರಣೆ ಮಾಡಲಿದ್ದು, ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಅಂದಾಜು 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವ ಅಂದಾಜಿದ್ದು, ಎಸ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ನೀಡುವ ಪರಿಹಾರ ಏನೇನೂ ಸಾಲದು ಎನ್ನುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಐದು ವರ್ಷದ ನಂತರ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು.

ಸೋಮವಾರ ಜಿಲ್ಲಾಡಳಿತಗಳೊಂದಿಗೆ ಮಳೆ ಹಾನಿ ಬಗ್ಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರಿಗೆ ಎಸ್‌.ಡಿ.ಆರ್.ಎಫ್. ಮಾರ್ಗಸೂಚಿಗಿಂತ ಹೆಚ್ಚಿನ ಪರಿಹಾರ ನಿಗದಿ ಮಾಡುವ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸದ್ಯ ವಿಪತ್ತು ನಿರ್ವಹಣಾ ಮಾರ್ಗಸೂಚಿಯಂತೆ ಪ್ರಸ್ತುತ ಗರಿಷ್ಠ ಎರಡು ಎಕ್ಟರ್ ಪ್ರದೇಶದ ಮಿತಿಗೊಳಪಟ್ಟು ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲಾಗುತ್ತಿದೆ. ಮಳೆಯಾಶ್ರಿತ ಬೆಳೆಗೆ 8,500 ರೂ., ನೀರಾವರಿ ಪ್ರದೇಶದ ಬೆಳೆಗೆ 17,000 ರೂ., ತೋಟಗಾರಿಕೆ ಬೆಳೆಗೆ 22,500 ರೂ. ಮೊತ್ತವನ್ನು ನೀಡಲಾಗುತ್ತಿದೆ.

ಈ ಪರಿಹಾರ ಮೊತ್ತ ಹೆಚ್ಚಳ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅತಿವೃಷ್ಟಿಯಿಂದಾಗಿ ವ್ಯಾಪಕ ಬೆಳೆ ಹಾನಿಯಾಗಿದೆ. ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಎಸ್‌.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಪರಿಹಾರ ನೀಡಿದರೆ ರೈತರಿಗೆ ಅನುಕೂಲವಾಗುವುದಿಲ್ಲ ಎನ್ನುವ ಕಾರಣಕ್ಕೆ ಪರಿಹಾರ ಮೊತ್ತ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read