BREAKING: ಮದ್ದೂರಿನಲ್ಲಿ ಪೊಲೀಸರಿಂದ ಲಾಠಿ ಏಟು ತಿಂದ ಮಹಿಳೆ ವಿರುದ್ಧ FIR ದಾಖಲು

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು, ಇದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಜನರನ್ನು ಚದುರಿಸಿದ್ದರು. ಈ ವೇಳೆ ಪೊಲೀಸರಿಂದ ಲಾಠಿ ಏಟು ತಿಂದ ಮಹಿಳೆಯೊಬ್ಬರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಲಾಠಿ ಏಟು ತಿಂದಿದ್ದ ಮದ್ದೂರಿನ ಶಿವಪುರ ನಿವಾಸಿ ಜ್ಯೋತಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮದ್ದೂರು ಠಾಣೆ ಪಿಐ ಶಿವಕುಮಾರ್ ನೀಡಿದ ದೂರುನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಸಿಎಂ ಹಾಗೂ ಮುಸ್ಲಿಂರ ವಿರುದ್ಧ ಅವಹೇಳನಕಾರಿ ಹೇಳಿಕೆ, ಅನ್ಯಧರ್ಮದ ಬಗ್ಗೆ ಧಕ್ಕೆಯಾಗುವಂತೆ ಪದ ಬಳಕೆ, ಕೋಮುಗಳ ನಡುವೆ ವೈಮನಸ್ಸು ಉಂಟುಮಾಡುವ ಹೇಳಿಕೆ, ವೈರತ್ವ ಉತ್ತೇಜನ ನೀಡುವ ಆರೋಪದಡಿ ಕೇಸ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read