ಮಂಡ್ಯ : ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಶಾಸಕ ಯತ್ನಾಳ್ ವಿರುದ್ಧವೂ FIR ದಾಖಲಾಗಿದೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ನಿನ್ನೆ ಯತ್ನಾಳ್ ಅವರು ಮದ್ದೂರಿಗೆ ಆಗಮಿಸಿದ್ದರು. ಈ ವೇಳೆ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದರು. ಈ ಆರೋಪದ ಮೇರೆಗೆ ಮದ್ದೂರು ಠಾಣೆ ಪಿಎಸ್ ಐ ಮಂಜುನಾಥ್ ದೂರಿನನ್ವಯ ಎಫ್ ಐ ಆರ್ ದಾಖಲಿಸಲಾಗಿದೆ.
ರಾಜ್ಯ ಬಿಜೆಪಿ ಹೊಂದಾಣಿಕೆ ರಾಜಕಾರಣವನ್ನು ಕೈಬಿಡಬೇಕು. ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಬಿಜೆಪಿಯವರು ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಈ ಬಗ್ಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ನಾನೇ ಒಂದು ಹೊಸ ಪಕ್ಷವನ್ನು ಕಟ್ಟುತ್ತೇನೆ ಎಂದರು.ನಾವು ಹಾಗೂ ಪ್ರತಾಪ್ ಸಿಂಹ ಸೇರಿ ಹೊಸ ಹಿಂದೂ ಪಕ್ಷವನ್ನು ಕಟ್ಟುತ್ತೇವೆ. ಬಿಜೆಪಿಯವರುರು ನನ್ನನ್ನು ಗೌರವದಿಂದ ವಾಪಸ್ ಕರೆಸಿಕೊಳ್ಳಲಿ. ಇಲ್ಲವಾದಲ್ಲಿ ಹೊಸ ಹಿಂದೂ ಪಕ್ಷ ಕಟ್ಟುತ್ತೇವೆ ಎಂದು ಹೇಳಿದರು.