ಹಾಸನ: ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನ ಸಾವುನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಕ್ಯಾಂಟರ್ ಚಾಲಕ ಭುವನೇಶ್ ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಇಂದು ನ್ಯಾಯಾಧೀಶರ ಮುಂದೆ ಭವನೇಶ್ ನನ್ನು ಪೊಲೀಸರು ಹಾಜರುಪಡಿಸಲಿದ್ದಾರೆ. ನಾಗಮಂಗಲದ ಬೆಳ್ಳೂರು ಆಸ್ಪತ್ರೆಗೆ ಭುವನೇಶ್ ನನ್ನು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಪೊಲೀಸರು ಮತ್ತೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಚಾಲಕ ಮದ್ಯಪಾನ ಮಾಡಿದ್ದನೆ ಎಂದು ಪರೀಕ್ಷಿಸಲು ರಕ್ತದ ಮಾದರಿ ಸಂಗ್ರಹಿಸಿದ್ದು, ಇಂದು ಚಾಲಕ ಭುವನೇಶ್ ಬ್ಲಡ್ ರಿಪೋರ್ಟ್ ಬರುವ ಸಾಧ್ಯತೆ ಇದೆ.
ಕ್ಯಾಂಟರ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನರಿಂದ ತೀವ್ರ ಥಳಿತಕ್ಕೆ ಒಳಗಾಗಿದ್ದ ಆತನಿಗೆ ಚಿಕಿತ್ಸೆ ಕೊಡಿಸಲಾಗಿತ್ತು.