ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅರಸ್ತೆ ಅಪಘಾತಕ್ಕೆ ಟೆಕ್ಕಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಹಂಪ್ ತಪ್ಪಿಸಲು ಹೋಗಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಟೆಕ್ಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಜ್ಞಾನಭಾರತಿ ಯುನಿವರ್ಸಿಟಿ ಬಳಿ ಈ ಅಪಘಾತ ಸಂಭವಿಸಿದೆ. ಸ್ವರೂಪ್ (26) ಮೃತ ಟೆಕ್ಕಿ. ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.