ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 15 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸೆಪ್ಟೆಂಬರ್ 15 ರ ಸೋಮವಾರದಂದು ಮಧ್ಯಾಹ್ನ 2.55 ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ-2025 ನ್ನು ಉದ್ಘಾಟಿಸುವರು. ನಂತರ ಅವರು ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಹೋಟೆಲ್ ಫಾರ್ಚೂನ್ನಲ್ಲಿ ನೂತನ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ನಂತರ ರಾತ್ರಿ 7 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕಾರ್ಯದರ್ಶಿ ತಿಳಿಸಿದ್ದಾರೆ.