BREAKING : ಈ ಭಾರಿ ‘ಬಾನು ಮುಷ್ತಾಕ್’ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ : ಹೈಕೋರ್ಟ್’ ನಲ್ಲಿ ‘PIL’ ವಜಾ.!

ಬೆಂಗಳೂರು : ಈ ಭಾರಿ ‘ಬಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ ಆಗಿದ್ದು, ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಪಿಐಎಲ್ (PIL) ವಜಾಗೊಂಡಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಬಾನು ಮುಷ್ಕಾಕ್ ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸೇರಿ ಮೂವರು ಅರ್ಜಿ ಸಲ್ಲಿಸಿದ್ದರು.

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.
ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read