ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಯಳಂದೂರು ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸುಮಂತ್ (22) ಹಾಗೂ ನಿತಿನ್ ಕುಮಾರ್ (16) ಮೃತ ದುರ್ದೈವಿಗಳು.
ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಟೊಮೆಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ನಡುವೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.