ಬೆಂಗಳೂರು : ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣೆ ಸರಹದ್ದಿನ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ:19.09.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ ಎಂದು ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ದಿನಾಂಕ ಮತ್ತು ಸಮಯ : 19.09.2025 ರಿಂದ 26.09.2025ರವರೆಗೆ (ಒಂದು ವಾರ)
ವಾಹನ ನಿರ್ಬಂಧಿಸಲಾದ ರಸ್ತೆ ಮಾರ್ಗ
ಲೇ ಅರೇಬಿಯಾ, ಬಿರಿಯಾನಿ ಜೋನ್ ಮತ್ತು ಕ್ರೋಮ್ ಜಂಕ್ಷನ್ ಬಳಿ ಹೊರವರ್ತುಲ ರಸ್ತೆಯಿಂದ ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ.
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ
ಮಹದೇವಪುರ ಕಾರ್ತಿಕ್ನಗರ ಕಡೆಯಿಂದ ಲೇ ಅರೇಬಿಯಾ ಮತ್ತು ಬಿರಿಯಾನಿ ಪಾಯಿಂಟ್ ಮೂಲಕ ಮಾರತ್ ಹಳ್ಳಿ – ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆಗೆ ಸಂಚರಿಸುವ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಕಡ್ಡಾಯವಾಗಿ ಕಲಾಮಂದಿರದ ಬಳಿ ಸರ್ವಿಸ್ ರಸ್ತೆಗೆ ತೆರಳಿ ಮಾರತಹಳ್ಳಿ ಕಾಂತಿ ಸ್ವೀಟ್ಸ್ ಅಂಡರ್ಪಾಸ್ ಬಳಿ ಯು-ಟರ್ನ್ ತೆಗೆದುಕೊಂಡು, ಮಾರತ್ ಹಳ್ಳಿ ಸೇತುವೆಯ ಬಳಿ ಎಡಕ್ಕೆ ತಿರುಗಿ ಮುನ್ನೇಕೊಳಾಲ, ಕಾಡುಬೀಸನಹಳ್ಳಿ ಜಂಕ್ಷನ್, ಪಣತ್ತೂರು ಮತ್ತು ಕರಿಯಮ್ಮನ ಅಗ್ರಹಾರ ಕಡೆಗೆ ಹೋಗಲು ಸರ್ವಿಸ್ ರಸ್ತೆಯಲ್ಲಿ ಸಂಚರಿಸುವುದು.
#ಸಂಚಾರಸಲಹೆ#TrafficAdvisory @DgpKarnataka @KarnatakaCops @CPBlr @Jointcptraffic @BlrCityPolice @blrcitytraffic @acpwfieldtrf @acpeasttraffic @mahadevapuratrf @halairporttrfps @KRPURATRAFFIC @wftrps @bwaditrafficps @ftowntrfps @jbnagartrfps @halasoortrfps @kghallitrfps… https://t.co/76SQwyrMqT pic.twitter.com/LzlG4WvKmB
— DCP Traffic East ಉಪ ಪೊಲೀಸ್ ಆಯುಕ್ತರು ಸಂಚಾರ ಪೂರ್ವ (@DCPTrEastBCP) September 17, 2025