ರಾಮನಗರ: 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಮನಗದಲ್ಲಿ ಅರಸು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೊನ್ನೆ ಬಿಜೆಪಿ ನಾಯಕರು ಬಂದು ಭಾಷಣ ಮಾಡಿ ಹೋಗಿದ್ದಾರೆ. ಮುಂದೆ ತಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದಿದ್ದಾರೆ. ಜೆಡಿಎಸ್ ನವರ ಹೆಸರು ಹೇಳಲೂ ಇಷ್ಟಪಡುವುದಿಲ್ಲ, ಜೆಡಿಎಸ್ ನ ಹಣೆಯಲ್ಲಿಯೂ ಬರೆದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮತ್ತೆ ಹುಟ್ಟಿಬಂದರೂ ತೆಗೆಯಲು ಸಾಧ್ಯವಿಲ್ಲ. ಮುಂದಿನ ಚುನಾವಣೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಬಿಜೆಪಿ, ಜೆಡಿಎಸ್ ನವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿದ್ದಾರೆ, ನಾವು ಭಾವಣೆಗಳ ಮೇಲೆ ರಾಜಕಾರಣ ಮಾದುತ್ತಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ಎಲ್ಲರಿಗೂ ನ್ಯಾಯ ಒದಗಿಸುವ ಸಮೀಕ್ಷೆ ಮಾಡಿಸುತ್ತಿದ್ದೇವೆ. ಸಮೀಕ್ಷೆ ವೇಳೆ ನೀವು ಮನೆಯಲ್ಲಿದ್ದು ಸರಿಯಾಗಿ ಬರೆಸಬೇಕು ಎಂದು ಹೇಳಿದರು. ವಿ.ಆರ್. ಸುದರ್ಶನ್ ಕೆಲ ಸಲಹೆ ಕೊಟ್ಟಿದ್ದಾರೆ. ಅದನ್ನು ಸಿಎಂ ಬಳಿ ಹೇಳುತ್ತೇನೆ ಎಂದು ಹೇಳಿದರು.