BIG NEWS : ರಾಜ್ಯದಲ್ಲಿ ‘ಅನುಕಂಪ ಆಧಾರದ ಮೇಲೆ ಹುದ್ದೆಗಳ ನೇಮಕಾತಿ’ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಅನುಕಂಪದ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಯುಕ್ತಾಯಲಯ ವ್ಯಾಪ್ತಿಯ ವಿಭಾಗೀಯ ಸಹ ನಿರ್ದೇಶಕರು ಹಾಗೂ ಜಿಲ್ಲಾ ಉಪನಿರ್ದೇಶಕರುಗಳ ಮುಖಾಂತರ ಅನುಕಂಪದ ಆಧಾರದ ಮೇಲೆ ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಶಿಫಾರಸ್ಸು ಮಾಡಿ ಸಲ್ಲಿಸಿರುವ ಪ್ರಸ್ತಾವನೆಗಳನ್ನು ಪರಿಗಣಿಸಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ನೇಮಕಾತಿ ಆದೇಶ ಹೊರಡಿಸುವ ಸಲುವಾಗಿ ಕೌನ್ಸಿಲಿಂಗ್ ಮುಖಾಂತರ ಸ್ಥಳ ನಿಯುಕ್ತಿಗೊಳಿಸಲು ತೀರ್ಮಾನಿಸಲಾಗಿದ್ದು, ದಿನಾಂಕ:22-09-2025 ರಂದು ಬೆಳಿಗ್ಗೆ 11.00 ಗಂಟೆಗೆ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-560001 ಇಲ್ಲಿ ಕೌನ್ಸಿಲಿಂಗ್ ನಡೆಯಲಿದ್ದು, ಅರ್ಜಿದಾರರು ಖುದ್ದು ಹಾಜರಾಗಿ ಕೌನ್ಸಿಲಿಂಗ್ ನಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ. ಹಾಗೂ ಈ ಕುರಿತು ಅಭ್ಯರ್ಥಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಲು ಸಂಬಂಧಿಸಿದ ಉಪನಿರ್ದೇಶಕರು (ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ. ಅರ್ಜಿದಾರರು ಕೌನ್ಸಿಲಿಂಗ್ ಸಂದರ್ಭದಲ್ಲಿ ಅಂಗೀಕೃತ ಭಾವಚಿತ್ರ ಸಹಿತ ಗುರುತಿನ ಚೀಟಿ ಯನ್ನು ಹಾಜರುಪಡಿಸತಕ್ಕದ್ದು ಎಂದು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read