ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದಿಂದ ಕೈ ಬಿಡುವಂತೆ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನ ಸಿಟಿ ಸಿವಿಲ್ 57 ನೇ ಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರವೇ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇನ್ನೂ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಇಂದು ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಸೆಪ್ಟೆಂಬರ್ 25 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಅದೇ ದಿನ ಆರೋಪಿಗಳ ವಿರುದ್ಧ ಪೊಲೀಸರು ಹೊರಿಸಿರುವ ರೇಣುಕಾಸ್ವಾಮಿ ಅಪಹರಣ, ಕೊಲೆ, ಸುಲಿಗೆ, ಸಾಕ್ಷ್ಯ ನಾಶ ಸೇರಿದಂತೆ ಇತರೆ ದೋಷಾರೋಪಗಳ, ನಿಗದಿಯಾಗಲಿದೆ.
ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ ಅರ್ಜಿ ಕುರಿತ ಆದೇಶವನ್ನು ಇಂದು ನ್ಯಾಯಾಲಯ ಪ್ರಕಟಿಸಲಿದೆ. ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಕುರಿತಾದ ಆದೇಶವೂ ಇಂದು ಪ್ರಕಟವಾಗಲಿದೆ.