ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರ ವಿಶೇಷ ಕಾಳಜಿಯಿಂದ ದಸರಾ ಹಬ್ಬದ ಪ್ರಯುಕ್ತ ಬಳ್ಳಾರಿ-ವಿಜಯನಗರ ರೈಲು ಪ್ರಯಾಣಿಕರಿಗೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಾಗಿದೆ.
ವಿಜಯನಗರ ರೈಲ್ವೆ ಬಳಕೆದಾರರ ಸಮಿತಿಯು ಬಳ್ಳಾರಿ- ಹೊಸಪೇಟೆ -ಕೊಪ್ಪಳ ಭಾಗದ ಜನರು ದಸರಾ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಬೆಂಗಳೂರು – ಮೈಸೂರು ನಿಂದ ಬಳ್ಳಾರಿ – ಹೊಸಪೇಟೆಗೆ ತೆರಳಲು ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು.
ಮನವಿಗೆ ಸ್ಪಂದಿಸಿದ ಸಂಸದ ಈ.ತುಕಾರಾಮ್ ಅವರು ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು ಕೋರಿದ ಮೇರೆಗೆ ರೈಲ್ವೆ ಇಲಾಖೆಯು ಬಳ್ಳಾರಿ-ವಿಜಯನಗರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸಂಚರಿಸಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.