ಮಂಗಳೂರು: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನ ಭೀತಿ ಎದುರಾಗಿದೆ.
ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್ ಗೆ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನ ಸೆ.30 ಕ್ಕೆ ಮುಂದೂಡಿದೆ.
ಅಕ್ರಮವಾಗಿ ಎರಡು ತಲ್ವಾರ್ ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ. ಎರಡು ನೋಟಿಸ್ ಜಾರಿ ಮಾಡಿದ್ದರೂ ಇದುವರೆಗೆ ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆ. 26ರಂದು ಅವರ ಮನೆಗೆ ತೆರಳಿದ ಬೆಳ್ತಂಗಡಿ ಪೊಲೀಸರು ಮೂರನೇ ನೋಟಿಸ್ ಅಂಟಿಸಿದ್ದು, ಸೆ. 29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.10 ದಿನಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರಿಸಿಕೊಂಡಿದ್ದಾರೆ. ಈ ನಡುವೆ ಅವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.