BIG NEWS: ಬನ್ನೇರುಘಟ್ಟದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗ ಹೃದಯಾಘಾತದಿಂದ ಸಾವು

ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಂಜಪ್ಪ (45) ಹೃದಯಾಘಾತದಿಂದ ಸಾವನ್ನಪ್ಪಿರುವ ವ್ಯಕ್ತಿ. ಬೆಂಗಳೂರಿನ ನಾಗರಬಾವಿ ನಿವಾಸಿ. ವ್ಹೀಕೆಂಡ್ ಹಿನ್ನೆಲೆಯಲ್ಲಿ ನಂಜಪ್ಪ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭನ್ನೇರುಘಟ್ಟ ಪಾರ್ಕ್ ಗೆ ಬಂದಿದ್ದರು. ಈ ವೇಳೆ ಸಫಾರಿಗೆ ತೆರಳಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಅವರನ್ನು ಝೂ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read