BREAKING : ಹೃದಯಾಘಾತದಿಂದ ಹಿರಿಯ ರಂಗಭೂಮಿ ಕಲಾವಿದ ‘ಯಶವಂತ ಸರದೇಶಪಾಂಡೆ’ ನಿಧನ.!

ಬೆಂಗಳೂರು : ಹೃದಯಾಘಾತದಿಂದ ಖ್ಯಾತ ನಟ, ರಂಗಭೂಮಿ ನಿರ್ದೇಶಕ ‘ಯಶವಂತ ಸರದೇಶಪಾಂಡೆ’ ನಿಧನರಾಗಿದ್ದಾರೆ.

‘ಯಶವಂತ ಸರದೇಶಪಾಂಡೆ’  ಅವರು ಇಂದು ಬೆಳಗ್ಗೆ ನಿಧನರಾಗಿದ್ದು, ಅವರಿಗೆ 60 ವರ್ಷ ವಯಸ್ಸಾಗಿತ್ತು. ಹೃದಯಾಘಾತ ಉಂಟಾದ ಕೂಡಲೇ ಅವರನ್ನು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಪಾತ್ರವಹಿಸಿದ್ದರು. ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದರು.

ಯಶವಂತ ಸರದೇಶಪಾಂಡೆಯವರು ಹುಟ್ಟಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬ ಹಳ್ಳಿಯಲ್ಲಿ ೧೩.೦೬.೧೯೬೫ರಲ್ಲಿ. ತಂದೆ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read