BREAKING: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೊನೆಗೂ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ ನೀಡಿ ಸರ್ಕಾರ ಆದೇಶ

ಬೆಂಗಳೂರು: ಬೆಂಗಳೂರು ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಬಗ್ಗೆ ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಸೂಚನೆಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ.

ಈ ಮೂಲಕ ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. 2025 -26 ನೇ ಸಾಲಿನ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕರನ್ನೇ ಮುಂದುವರೆಸಲು ಆದೇಶಿಸಲಾಗಿದೆ. ಪ್ರಕ್ರಿಯೆ ಮುಂದುವರೆದ ಬೆನ್ನಲ್ಲೇ ಪಠ್ಯ ಬೋಧನೆ ಉಳಿದರೆ ಯುಜಿಸಿ ವಿದ್ಯಾರ್ಹತೆ ಪಡೆದವರನ್ನು ಅತಿಥಿ ಉಪನ್ಯಾಸಕರನ್ನಾಗಿ ನೇಮಕ ಮಾಡಿಕೊಳ್ಳುವಂತೆ ಸೂಚಿಸಿ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

2025-26 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂಬಂಧಿಸಿದಂತೆ, ಉಲ್ಲೇಖಿತ ಏಕ ಕಡತದಲ್ಲಿ ಕೋರಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಮಾನ್ಯ ಹೆಚ್ಚುವರಿ ಅಡ್ವಕೆಟ್ ಜನರಲ್ ರವರು ನೀಡಿರುವ ಕಾನೂನು ಅಭಿಪ್ರಾಯದಂತೆ, ರಿಟ್ ಅಪೀಲು ಸಂಖ್ಯೆ:1578/2024 ರಲ್ಲಿ ಮಾನ್ಯ ನ್ಯಾಯಾಲಯವು ದಿನಾಂಕ:09-09-2025 ರಂದು ನೀಡಿರುವ ಮಧ್ಯಂತರ ಆದೇಶದ ಅವಲೋಕನೆಗಳಿಗೆ ಒಳಪಟ್ಟು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಹಾಲಿ ಸೆಮಿಸ್ಟರ್ ಪೂರ್ಣಗೊಳ್ಳುವವರೆಗೆ 2024-25ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಕಾರ್ಯಭಾರಕ್ಕೆ ಅನುಗುಣವಾಗಿ ಮುಂದುವರೆಸಲು ಹಾಗೂ ಈ ರೀತಿ ಮುಂದುವರಿಕೆ ನಂತರವೂ ಕಾರ್ಯಭಾರವಿದ್ದಲ್ಲಿ ಅಂತಹ ಕಾರ್ಯಭಾರಕ್ಕೆ ಎದುರಾಗಿ, ಮಾನ್ಯ ನ್ಯಾಯಾಲಯದ ಮಧ್ಯಂತರ ಆದೇಶದನುಸಾರ, ಪ್ರಸ್ತುತ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಯು.ಜಿ.ಸಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಅತಿಥಿ ಉಪನ್ಯಾಸಕರನ್ನಾಗಿ ಆಯ್ಕೆ ಮಾಡಿಕೊಳ್ಳಲು ಅನುಮತಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read