ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕ ಮರುಪಾವತಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು :  ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಅ.31 ಕ್ಕೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in/ ಈ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಬೇಕಾಗಿ ತಿಳಿಸಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ ಮತ್ತು ಇಮೇಲ್ 8050770005 bcwdhelpline@gmail.com, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಇಮೇಲ್ postmetrichelp@karnataka.gov.in ಮತ್ತು ಸಹಾಯವಾಣಿ ಸಂಖ್ಯೆ 1902 ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read