ವಿಜಯನಗರ: ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗ ಚಿಕಿತ್ಸೆ ಪ್ಜಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಸೆ.11ರಂದು ಎಲ್ ಪಿಜಿ ಸಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮಗ ಸೇರಿದಂತೆ 11 ಜನರು ಗಂಭೀರವಾಗಿ ಗಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳು ತಾಯಿ-ಮಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮಗ ವಕೀಲ ಹಾಲಪ್ಪ (43) ಹಾಗೂ ತಾಯಿ ಗಂಗಮ್ಮ (80) ಮೃತ ದುರ್ದೈವಿಗಳು.