ಬೆಂಗಳೂರು: ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸೇರಿದಂತೆ ಮೂವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧಾರ ಕೈಗೊಂಡಿದೆ.
ಸ್ಪೀಕರ್ ಯು.ಟಿ. ಖಾದರ್ ಅವರೊಂದಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಮತ್ತು ಜೆಪಿ ಅಗ್ರಿ ಜೆನೆಟಿಕ್ ಸಂಸ್ಥಾಪಕ ಟಿ.ಬಿ. ಪ್ರಸನ್ನ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು. ಅಕ್ಟೋಬರ್ 8ರಂದು ಬೆಂಗಳೂರು ವಿವಿ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಎಸ್.ಎಂ. ಜಯಕರ ತಿಳಿಸಿದ್ದಾರೆ.
ಹೈದರಾಬಾದ್ ನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಯೋಗಾಲಯದ ಮಾಜಿ ನಿರ್ದೇಶಕ ಪ್ರಹ್ಲಾದ್ ರಾಮರಾವ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ.