ಕೊಪ್ಪಳ : ರಾಜ್ಯದಲ್ಲಿ ಕೆಮ್ಮಿನ ಔಷಧಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಲಭ್ಯವಿರುವ ಕೆಮ್ಮಿನ ಔಷಧಗಳ ಪರೀಕ್ಷೆಯನ್ನು ಇಲಾಖೆ ನಡೆಸಿದ್ದು, ಅಪಾಯಕಾರಿ ಅಂಶ ಪತ್ತೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತ ವಿಚಾರ ನ್ಯಾಯಾಲಯದಲ್ಲಿ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.
* ಕೇಂದ್ರ ಸಚಿವ ವಿ.ಸೋಮಣ್ಣ ಸಮಸಮಾಜದ ವಿರೋಧಿ:
— Siddaramaiah (@siddaramaiah) October 6, 2025
ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ… pic.twitter.com/sKDHdVBPJA