BREAKING: ಇ –ಸ್ವತ್ತು ವಿತರಣೆಗೆ ಲಂಚ ಪಡೆದ ಪಿಡಿಒ ಅಮಾನತು

ಹಾಸನ: ಅರಕಲಗೂಡು ತಾಲ್ಲೂಕಿನ ಚಿಕ್ಕಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಪಿ. ಮನು ಅವರನ್ನು ಅಮಾನತು ಮಾಡಲಾಗಿದೆ.

ಇವರು ಮಹೇಶ್ ಕೆ.ಕೆ. ಕೋನಾಪುರ ಗ್ರಾಮ, ಅರಕಲಗೂಡು ತಾಲ್ಲೂಕು ಇವರ ನಿವೇಶನ ಖಾತೆ ಸಂಖ್ಯೆ 52 ಮತ್ತು 206ಕ್ಕೆ ಸಂಬಂಧಿಸಿದಂತೆ ಇ-ಸ್ವತ್ತು ವಿತರಣೆ ಮಾಡಲು ಹಣ ಪಡೆದಿರುವ ಮತ್ತು ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಮತ್ತು ನಿಧಿ-1, ನಿಧಿ-2 ರ ಅನುದಾನವನ್ನು ನಿಯಮ ಬಾಹಿರವಾಗಿ ವೆಚ್ಚ ಮಾಡಿರುವ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿ, ತಾಲ್ಲೂಕು ಪಂಚಾಯತ್, ಅರಕಲಗೂಡು ಇವರು ತನಿಖೆ ನಡೆಸಿ ಸಲ್ಲಿಸಿರುವ ತನಿಖಾ ವರದಿಯನ್ವಯ ಇವರ ಮೇಲಿನ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಸಿ.ಪಿ. ಮನು ಇವರನ್ನು ಅ.6 ರಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read