ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮುಖಂಡನನ್ನು ಹತ್ಯೆ ಮಾಡಲಾಗಿದೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ(31) ಹತ್ಯೆಯಾದವರು. ಗಂಗಾವತಿಯ ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಎರಡು ಗಂಟೆಗೆ ಕಾರ್ ನಲ್ಲಿ ಆಗಮಿಸಿದ್ದ ಆರೋಪಿಗಳು ವೆಂಕಟೇಶ್ ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.
ಮಾರಕಾಸ್ತ್ರಗಳಿಂದ ಕೊಚ್ಚಿ ವೆಂಕಟೇಶ ಕುರುಬರ ಅವರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯ ನಿಖರ ಕಾರಣ ಗೊತ್ತಾಗಿಲ್ಲ.
ಸಿನಿಮಾ ಶೈಲಿಯಲ್ಲಿ ಹತ್ಯೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರ್ ನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.