ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ಸಮೀಪದ ಮಾಡಮಗೇರಿ ಗ್ರಾಮ ಪಂಚಾಯಿತಿ ಪಿಡಿಒ ಜಯಗೌಡ ಸಿದ್ದಗೌಡ ಪಾಟೀಲ್ ಅವರ ಮೇಲೆ ಕರ್ತವ್ಯದ ವೇಳೆಯಲ್ಲಿ ಹಲ್ಲೆ ನಡೆಸಲಾಗಿದೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯರಗಟ್ಟಿ ತಾಲೂಕಿನ ಮಾಡಮಗೇರಿ ಗ್ರಾಮದ ಪರಮೇಶಿ ಲಕ್ಷ್ಮಣ ಚಿತ್ರಕೋಟಿ, ಹನುಮಂತ, ಸಿದ್ದಪ್ಪ, ಯಲ್ಲಪ್ಪ ಎಂಬುವರ ಮೇಲೆ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲು ದಾಖಲೆಗಳ ಆಧಾರದ ಮೇಲೆ ಆಸ್ತಿಯ ಇ- ಸ್ವತ್ತು ಕೊಡುವಂತೆ ಆರೋಪಿಗಳು ಒತ್ತಾಯಿಸಿದ್ದರು. ಆದರೆ, ಇದು ಕಾನೂನುಬಾಹಿರವಾಗಿದ್ದು ಕೊಡಲು ಬರುವುದಿಲ್ಲ ಎಂದು ಪಿಡಿಒ ಜಯಗೌಡ ಹೇಳಿದ್ದರು. ಇದೇ ಕಾರಣಕ್ಕೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.