ಬೆಂಗಳೂರು: ಕಳೆದ ವರ್ಗಾವಣೆಯ ನಂತರ ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ(ಎಂಎಸ್ಎಂಇ ಗಣಿ) ಕಾರ್ಯದರ್ಶಿ ಹುದ್ದೆಗೆ ನಿಯೋಜಿಸಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಇದುವರೆಗೂ ಆ ಹುದ್ದೆಯಲ್ಲಿದ್ದ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಅವರಿಗೆ ದೆಹಲಿ ಕರ್ನಾಟಕ ಭವನ(ಸಮನ್ವಯ) ಕಾರ್ಯದರ್ಶಿ ಸ್ಥಾನ ಹೆಚ್ಚುವರಿಯಾಗಿ ನೀಡಲಾಗಿದೆ.