BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್!

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ. ಜಾರಕಿಹೊಳಿ ಬಣದ 6 ಜನ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿದ್ದಾರೆ.

ಡಿಸಿಸಿ ಬ್ಯಾಂಕ್ ನ 16 ನಿರ್ದೇಶಕ ಸ್ಥಾನಗಳ ಪೈಕಿ 6 ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಚಿಕ್ಕೋಡಿಯಿಂದ ಗಣೇಶ್ ಹುಕ್ಕೇರಿ, ಯರಗಟ್ಟಿಯಿಂದ ವಿಶ್ವಾಸ ವೈದ್ಯ, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರೂಪಾಕ್ಷ ಮಾಮನಿ, ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ್, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧ ಆಯ್ಕೆಯಾಗಿದ್ದಾರೆ.

ಜಾರಕಿಹೊಳಿ ಬಣದ 6 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಕ್ಟೋಬರ್ 13ರಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read