ಹಾಸನ : ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಅ.15 ರಂದು ಹಾಸನ ಜಿಲ್ಲಾ ಪ್ರವಾಸ ಮಾಡಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಹಾಸನ ನಗರದ ಭುವನಹಳ್ಳಿ ಹೆಲಿಪ್ಯಾಡ್ಗೆ ಆಗಮಿಸಿ, ನಂತರ ಶ್ರೀ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆಯಲಿರುವರು.
ನಂತರ ಮಧ್ಯಾಹ್ನ 12 ಗಂಟೆಗೆ ಭುವನಹಳ್ಳಿ ಹೆಲಿಪ್ಯಾಡ್ನಿಂದ ಮೈಸೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.