BREAKING: ದುಡುಕಿನ ನಿರ್ಧಾರ ಕೈಗೊಂಡ ಯೋಧ ಆತ್ಮಹತ್ಯೆ

ಮೈಸೂರು: ಮನೆ ಕಟ್ಟಲು ಪಡೆದಿದ್ದ ಸಾಲ ತೀರಿಸಲಾಗದೇ ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ಘಟನೆ ನಡೆದಿದೆ.

ನೇಣು ಬಿಗಿದುಕೊಂಡು ಯೋಧ ಎಂ. ಚಂದ್ರಶೇಖರ್(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ ಪ್ಯಾರಾಚೂಟ್ ರೆಜಿಮೆಂಟ್ ನ ಯೋಧರಾಗಿದ್ದರು, ಹುಣಸೂರಿನ ಹೊಸ ಬಡಾವಣೆಯಲ್ಲಿ ಹೊಸದಾಗಿ ಮನೆ ನಿರ್ಮಿಸಿದ್ದರು.

ಎರಡು ವರ್ಷಗಳ ಹಿಂದೆ ಎಂ. ಚಂದ್ರಶೇಖರ್ ಅವರು ಮನೆ ನಿರ್ಮಿಸಿದ್ದು, ಬ್ಯಾಂಕ್ ನಲ್ಲಿ ಮತ್ತು ಸ್ನೇಹಿತರ ಬಳಿ ಸಾಲ ಪಡೆದುಕೊಂಡಿದ್ದರು. ಸಾಲ ತೀರಿಸಲಾಗದೆ ಯೋಧ ಎಂ. ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ. ಆಗ್ರಾ, ಜಮ್ಮು –ಕಾಶ್ಮೀರ, ಚೀನಾ ಗಡಿಯಲ್ಲಿ ಅವರು ಕಾರ್ಯ ನಿರ್ವಹಿಸಿದ್ದರು. ಒಂದು ತಿಂಗಳ ಹಿಂದೆ ರಜೆಯ ಮೇಲೆ ಮನೆಗೆ ಬಂದಿದ್ದ ಎಂ. ಚಂದ್ರಶೇಖರ್ ದೀಪಾವಳಿ ಹಬ್ಬದ ನಂತರ ಕರ್ತವ್ಯ ತೆರಳಬೇಕಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read