SHOCKING : ರಾಜ್ಯದಲ್ಲಿ ಅಮಾನವೀಯ ಘಟನೆ : 8 ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದ ಪಾಪಿಗಳು.!

ಚಿಕ್ಕಮಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, 8 ಸಾಕು ನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿ ಕೊಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರದ ಅಬ್ಬಿಗುಂಡಿ ಬಳಿ ನಡೆದಿದೆ.

ಸತ್ಯನಾರಾಯಣ ಎಂಬುವವರ ಮನೆಯಲ್ಲಿ ಸಾಕಿದ್ದ 8 ನಾಯಿಗಳಿಗೆ ವಿಷ ಹಾಕಿ ಕೊಲ್ಲಲಾಗಿದೆ.
ಸತ್ತ ಕೋಳಿಗಳಿಗೆ ಕ್ರಿಮಿನಾಶಕ ಹಾಕಿ ಇಡಲಾಗಿತ್ತು. ಅದನ್ನು ತಿಂದು 8 ನಾಯಿಗಳು ಮೃತಪಟ್ಟಿದೆ.

ಘಟನೆಗೆ ಗ್ರಾಮಸ್ಥರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ.ಸಾಕು ನಾಯಿ ಸಾವಿಗೆ ಮಾಲೀಕರು ಕಂಬನಿ ಮಿಡಿದಿದ್ದಾರೆ. ಮನೆ ಮಾಲೀಕರ ಮೇಲಿನ ದ್ವೇಷಕ್ಕೆ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read