ಬೀದಿ ಬದಿ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯಕ್ಕಾಗಿ ನಗರದ ಬೀದಿ ಬದಿ ವ್ಯಾಪಾರಸ್ಥರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ.

ಬೇಕಾದ ದಾಖಲೆ:

ಅರ್ಜಿದಾರರ ಆಧಾರ್ ಕಾರ್ಡ್, ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, 2 ಪಾಸ್‌ಪೋರ್ಟ್ ಭಾವಚಿತ್ರ, ವ್ಯಾಪಾರ ಮಾಡುವ ಭಾವಚಿತ್ರ, ರೇಷನ್ ಕಾರ್ಡ್ ಇನ್ನಿತರೆ ದಾಖಲೆಗಳನ್ನು ಸಲ್ಲಿಸಬೇಕು. ಬೀದಿ ಬದಿ ವ್ಯಾಪಾರಸ್ಥರು ಪಿಎಮ್-ಸ್ವಾನಿಧಿ ಆನ್‌ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಛೇರಿ – 2 ರ ಡೇ-ನಲ್ಮ್ ಶಾಖೆ ಅಥವಾ ದೂ.08392-273479, 278168 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read