ಕರ್ನೂಲು: ಆಂಧ್ರಪ್ರದೇಶದ ಕರ್ನೂಲು ಬಳಿ ಖಾಸಗಿ ಬಸ್ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೈದರಾಬಾದ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹೊತ್ತಿ ಉರಿದಿದ್ದು, ಬಸ್ ನಲ್ಲಿದ್ದ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಬಸ್ ನಲ್ಲಿದ್ದ 12 ಜನರಿಗೆ ಗಾಯಗಳಾಗಿದ್ದು, ಕರ್ನೂಲ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಕಾವೇರಿ ಟ್ರಾವೆಲ್ಸ್ ಗೆ ಸೇರಿದ ಬಸ್ ಒತ್ತಿ ಉರಿದಿದೆ. ಚಿನ್ನತೇಕೂರು ಗ್ರಾಮದ ಬಳಿ ಘಟನೆ ನಡೆದಿದೆ.
ಮುಂಜಾನೆ 3ರಿಂದ 4 ಗಂಟೆ ನಡುವೆ ದುರ್ಘಟನೆ ನಡೆದಿದೆ. ಬಸ್ ನಲ್ಲಿ ಸುಮಾರು ಮೂವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದ ಮಾಹಿತಿ ಗೊತ್ತಾಗಿದೆ. ಎಮರ್ಜೆನ್ಸಿ ದ್ವಾರದ ಮೂಲಕ 12 ಪ್ರಯಾಣಿಕರು ಹೊರಗೆ ಬಂದಿದ್ದಾರೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
