ಕರ್ನೂಲ್: ಆಂಧ್ರಪ್ರದೇಶದ ಕರ್ನೂಲು ಬಳಿ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಹೈದರಾಬಾದ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿದ್ದ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 8 ರಿಂದ 10 ಜನ ಸಜೀವನವಾಗಿರುವ ಶಂಕೆ ಇದೆ. ಬಸ್ ನಲಿದ್ದ ಇಪ್ಪತ್ತು ಜನ ಗಾಯಗೊಂಡಿದ್ದು, ಕರ್ನೂಲು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾವೇರಿ ಟ್ರಾವೆಲ್ಸ್ ಗೆ ಸೇರಿದ ಬಸ್ ಹೊತ್ತಿ ಉರಿದಿದೆ. ಚಿನ್ನಟೇಕೂರು ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಬಸ್ ನಲ್ಲಿ ಸುಮಾರು 30ಕ್ಕೂ ಅಧಿಕ ಪ್ರಯಾಣಿಕರು ಇದ್ದ ಮಾಹಿತಿ ಗೊತ್ತಾಗಿದೆ. ಮುಂಜಾನೆ 3ರಿಂದ 4 ಗಂಟೆ ನಡುವೆ ಘಟನೆ ನಡೆದಿದೆ.
ಬಸ್ ನಲ್ಲಿದ್ದ ಕೆಲವು ಗ್ಲಾಸ್ ಒಡೆದು ಹೊರಗೆ ಬಂದಿದ್ದಾರೆ. ಇನ್ನು ಕೆಲವರು ಎಮರ್ಜೆನ್ಸಿ ದ್ವಾರದ ಮೂಲಕ ಹೊರಗೆ ಬಂದಿದ್ದಾರೆ. ಬಸ್ ನಿಂದ ಹೊರ ಬಂದು 20 ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
