ಆರ್.ಎಸ್.ಎಸ್ ಮುಖಂಡನಿಗೆ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ: ಸಿಎಂ ಆದೇಶ ಹಿಂಪಡೆಯುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ

ಬೆಂಗಳೂರು: ಆರ್.ಎಸ್.ಎಸ್ ಸದಸ್ಯನಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯತ್ವ ನೀಡಿ ಆದೇಶ ಹೊರಡಿಸಲಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಎನ್.ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಯೇ ಇದ್ದು, ಸಿಎಂ ಸಿದ್ದರಾಮಯ್ಯನವರೇ ಯಶಸ್ವಿನಿ ಸಹಕಾರ ಆರೋಗ್ಯ ಟ್ರಸ್ಟ್ ನ ಮಹಾಪೋಷಕರಾಗಿದ್ದಾರೆ. ಆರ್.ಎಸ್.ಎಸ್ ಸದಸ್ಯ ಡಾ.ಶ್ರೀಧರ್ ಕುಮಾರ್ ರನ್ನು ಟ್ರಸ್ಟ್ ಸದಸ್ಯರನ್ನಾಗಿ ಮಾಡಿ ಆದೇಶ ಹೊರಡಿಸಿರುವುದು ಸೂಕ್ತವಲ್ಲ. ಸಿಎಂ ಅವರೇ ಈ ಆದೇಶ ಹೊರಡಿಸಿರಬಹುದಾದ ಸಾಧ್ಯತೆ ಇದೆ. ಹಾಗಾಗಿ ಸಿಎಂ ಗಮನಕ್ಕೆ ತರುತ್ತಿರುವುದಾಗಿ ಕಾಂಗ್ರೆಸ್ ಮುಖಂಡ ಟೂಡಾ ಶ್ರೀಧರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಕ್ಷಣ ಆರ್.ಎಸ್.ಎಸ್ ಮುಖಂಡನಿಗೆ ನಿಡಿರುವ ಟ್ರಸ್ಟ್ ಸದಸ್ಯತ್ವ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read