BREAKING : ರಾಜ್ಯ ಸರ್ಕಾರಕ್ಕೆ ಹಿನ್ನಡೆ : ‘RSS ಪಥ ಸಂಚಲನ’ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ.!

ಬೆಂಗಳೂರು : ಆರ್ ಎಸ್ ಎಸ್ ಪಥ ಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿ, ಧಾರವಾಡ ಹೈಕೋರ್ಟ್ ಪೀಠವು, ಸರ್ಕಾರಿ ಆವರಣದಲ್ಲಿ ಖಾಸಗಿ ಸಂಸ್ಥೆಗಳು ಚಟುವಟಿಕೆಗಳನ್ನು ನಡೆಸುವ ಮೊದಲು ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸುವ ತನ್ನ ಆದೇಶಕ್ಕೆ ತಡೆ ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ. ಆರ್ಎಸ್ಎಸ್ ಸಂಬಂಧಿತ ಚಟುವಟಿಕೆಗಳನ್ನು ನಿರ್ಬಂಧಿಸುವ ಗುರಿಯನ್ನು ಹೊಂದಿದೆ ಎಂದು ಹಲವರು ಭಾವಿಸಿದ ಈ ಆದೇಶವು ಮುಂದಿನ ವಿಚಾರಣೆಯವರೆಗೆ ತಡೆಹಿಡಿಯಲಾಗಿದೆ. ಸರ್ಕಾರದ ನಿರ್ದೇಶನವನ್ನು ಪ್ರಶ್ನಿಸಿ ಪುನಶ್ಚೈತನ್ಯ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿದ್ದು, ಈ ಕ್ರಮವು ಖಾಸಗಿ ಸಂಸ್ಥೆಗಳು ಕಾನೂನುಬದ್ಧ ಚಟುವಟಿಕೆಗಳನ್ನು ನಡೆಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿತು.

ಧಾರವಾಡದ ಹೈಕೋರ್ಟ್ ಪೀಠದಲ್ಲಿ ಪುನಃಕ್ಷೇತನ ಸೇವಾ ಸಂಸ್ಥೆ ಹುಬ್ಬಳ್ಳಿಯ ಎನ್ಜಿಓ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಅರ್ಜಿಯಲ್ಲಿ ಆದೇಶ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ. ಆದೇಶದಲ್ಲಿ 10 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಎಂದು ನಿರ್ಬಂಧ ವಿಧಿಸಿತ್ತು. ಈ ನಿರ್ಬಂಧ ವಿಧಿಸಲು ಕಾನೂನಿನಲ್ಲಿ ಅವಕಾಶ ಇಲ್ಲ. ಸಭೆ ಸಮಾರಂಭಗಳಲ್ಲಿ ಜನ ಸೇರುವ ಹಕ್ಕಿದೆ ಆ ಹಕ್ಕನ್ನು ಉಲ್ಲಂಘನೆ ಮಾಡಲಾಗುತ್ತಿದೆ . ಸಂವಿಧಾನ ನೀಡಿರುವ ಮೂಲಭೂತ ಹಕ್ಕನ್ನು ಸರ್ಕಾರದ ಒಂದು ಆದೇಶದ ಮೂಲಕ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿತ್ತು.ಪಾರ್ಕ್, ಮೈದಾನ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪಾಗಿ ಸೇರುವಂತಿಲ್ಲ ಎಂದು ಆದೇಶ ಹೊರಡಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದ ಮಂಡಿಸಲಾಗಿತ್ತು.

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿರ್ಬಂಧ ಸೇರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಲು ಆದೇಶ ಹೊರಡಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read