ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ಮಾಲೀಕರು ಪ್ರದರ್ಶಿಸಬೇಕು ಎಂದು ಬಳ್ಳಾರಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ.
ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
