‘CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯ ಮುಖ್ಯಾಂಶಗಳು ಹೀಗಿವೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆ ನಡೆದಿದೆ. ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಸಿಎಂ ಹೇಳಿದರು.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು.

ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಲಾಗುವುದು.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ, ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ
ಕನಕ ಪರಿಸರ ಉದ್ಯಾನದಲ್ಲಿ ಖಾಲಿ ಇರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು
ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳ ಜಾರಿಗೆ ಶೀಘ್ರ ಕ್ರಮ ವಹಿಸಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read