ಬೆಂಗಳೂರು : ಜಾತಿ ಗಣತಿ ಸಮೀಕ್ಷೆ’ದಾರರ ಮಾಹಿತಿಯನ್ನ ತುರ್ತಾಗಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಕಾರ್ಯ ನಿರ್ವಹಿಸಿರುವ ಸಮೀಕ್ಷಾದಾರರ ಮತ್ತು ಮೇಲ್ವಿಚಾರಕರ ಮಾಹಿತಿಯನ್ನು ಒದಗಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (1) ರಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಉಲ್ಲೇಖ (2)ರಲ್ಲಿ ಈ ಕೆಳಕಂಡಂತೆ ಗೌರವ ಧನವನ್ನು ನಿಗದಿಪಡಿಸಿ ಆದೇಶಿಸಿದೆ.
ಉಲ್ಲೇಖ (3)ರಲ್ಲಿ ಸಮೀಕ್ಷಾದಾರರಿಗೆ ಗೌರವ ಧನ ಪಾವತಿಸಲು ಮೊದಲನೇ ಕಂತಿನಲ್ಲಿ ತಲಾ ರೂ. 5,000/- ದಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಸಮೀಕ್ಷೆದಾರರಿಗೆ ಬಾಕಿ ಮೊತ್ತ ಹಾಗೂ ಮೇಲ್ವಿಚಾರಕರಿಗೆ ನಿಗದಿಪಡಿಸಿದ ಗೌರವ ಧನವನ್ನು ಬಿಡುಗಡೆ ಮಾಡಬೇಕಾಗಿದ್ದು ಈ ಕೆಳಕಂಡ ನಮೂನೆಯಲ್ಲಿ ಮಾಹಿತಿ ಒದಗಿಸಲು ಉಲ್ಲೇಖ (4)ರಲ್ಲಿ ಕೋರಲಾಗಿರುತ್ತದೆ. ಆದರೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಿಂದ ಇದುವರೆಗೆ ಮಾಹಿತಿಯನ್ನು ಸಲ್ಲಿಸಿರುವುದಿಲ್ಲ. ಆದ್ದರಿಂದ ಕೋರಿರುವ ಮಾಹಿತಿಯನ್ನು ಅತೀ ಜರೂರು ಎಂದು ಪರಿಗಣಿಸಿ, ಈ ಕೆಳಕಂಡ ನಮೂನೆಯಲ್ಲಿ ಮಾಹಿತಿಯನ್ನು ಕಳುಹಿಸಲು ಮತ್ತೊಮ್ಮೆ ಕೋರಿದೆ.


