BREAKING : ಮಂಡ್ಯ ‘ಡಿಸಿ ಕಚೇರಿ’ ಬಳಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು.!


ಮಂಡ್ಯ : ಆಸ್ತಿ ವಿಚಾರವಾಗಿ ಮಂಡ್ಯ ಡಿಸಿ ಕಚೇರಿ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ
ಮೃತಪಟ್ಟಿದ್ದಾರೆ.

ಮೃತರನ್ನು ಕೆ ಆರ್ ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ (55) ಎಂದು ಗುರುತಿಸಲಾಗಿದೆ.

ಜಮೀನು ವ್ಯಾಜ್ಯದ ಹಿನ್ನೆಲೆ ಬೇಸತ್ತಿದ್ದ ಅವರು ನಿನ್ನೆ ಜಿಲ್ಲಾಧಿಕಾರಿ ಕಚೇರಿ ಎದುರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ನಂತರ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ದೇಹದ ಶೇ.60 ರಷ್ಟು ಭಾಗ ಸುಟ್ಟು ಹೋಗಿದ್ದರಿಂದ ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ರೈತ ಮಂಜೇಗೌಡ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read