BIG NEWS: ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯದ ಡಿಸಿ ಕಚೇರಿ ಬಳಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೈತನ ಕುಟುಂಬಕ್ಕೆ ರಾಜ್ಯ ಸರ್ಕಾರ ೫ ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕೃಷಿ ಸಚಿವ ಚಲುವರಾಯಸ್ವಾಮಿ, ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತ ಮಂಜೇಗೌಡ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟೂಂಬದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಸಚಿವರು, ಮೃತ ರೈತನ ಕುಟುಂಬಕ್ಕೆ ೫ ಲಕ್ಷ ಪರಿಹಾರ ನೀಡಲಾಗುವುದು ಎಂದರು. ಮಂಜೇಗೌಡ ಅವರ ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಜಂಟಿ ಸರ್ವೆ ನಡೆಸಲಾಗುವುದು. ಜಾಗವೇನಾದರೂ ಅರಣ್ಯ ಇಲಾಖೆ ಒಡೆತನಕ್ಕೆ ಸೇರಿದ್ದರೆ ಆಜಾಗವನ್ನು ಕುಟುಂಬದವರಿಗೆ ನೀಡುವುದಾಗಿ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read