ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ವತಿಯಿಂದ ವಿವಿಧ ವೃತ್ತಿಯ ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳು ಸ್ವೀಕೃತವಾಗಿದ್ದು, ಈ ವಿವಿಧ ಸುರಕ್ಷತಾ ಕಿಟ್ಗಳನ್ನು ಪಡೆಯಲು ಅರ್ಹ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮೇಸನ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಾರ್ಪೆಂಟರ್, ಪೇಂಟರ್ ಹಾಗೂ ಪ್ಲಂಬರ್ ಕಿಟ್ಗಳಿಗಾಗಿ ನೋಂದಾಯಿತ ಕಾರ್ಮಿಕರಿಗಾಗಿ ಚಾಲ್ತಿಯಲ್ಲಿರುವ ಗುರುತಿನ ಚೀಟಿ, ಆಧಾರ್ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಹಾಗೂ ಈ ಹಿಂದೆ ಯಾವುದಾದರೂ ಕಿಟ್ ಪಡೆಯದಿರುವ ಕುರಿತು ಸ್ವಯಂ ಘೋಷಣಾ ಪತ್ರದೊಂದಿಗೆ ಅರ್ಜಿಯನ್ನು ನವೆಂಬರ್ 18 ರೊಳಗಾಗಿ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿ ಕೊಪ್ಪಳ, ಕುಷ್ಟಗಿ, ಗಂಗಾವತಿ ಯಲ್ಲಿ ಕಡ್ಡಾಯವಾಗಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಜೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡಿ ಕಿಟ್ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
