ಮಂಡ್ಯ: ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ 5000 ರೂ. ಲಂಚ ಪಡೆಯುತ್ತಿದ್ದ ಮಳವಳ್ಳಿ ಗ್ರಾಮಾಂತರ ಠಾಣೆಯ ಹೆಡ್ ಕಾನ್ ಸ್ಟೆಬಲ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಾಮೀನು ಪಡೆದು ಬಿಡುಗಡೆಯಾಗಿರುವ ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ರೌಡಿಶೀಟರ್ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ವೆಂಕಟೇಶ್ 5000 ರೂ. ಲಂಚ ಕೇಳಿರುವುದಾಗಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಗುರುವಾರ ರಾತ್ರಿ ಪೊಲೀಸ್ ಠಾಣೆ ಎದುರಿನ ಹೋಟೆಲ್ ವೊಂದರ ಸಮೀಪ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
