BREAKING : ‘ಕಾಂತಾರ’ ಚೆಲುವೆಗೆ ಸೈಬರ್ ಖದೀಮರ ಕಾಟ : ಹಣ ಕಳುಹಿಸ್ಬೇಡಿ ಎಂದು ಎಚ್ಚರಿಸಿದ ನಟಿ ರುಕ್ಮಿಣಿ ವಸಂತ್.!

ಬೆಂಗಳೂರು : ಅನಾಮಿಕ ವ್ಯಕ್ತಿಯೋರ್ವ ನಟಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಘಟನೆ ಬೆಳಕಿಗೆ ಬಂದಿದ್ದು, ಹಣ   ಕಳುಹಿಸ್ಬೇಡಿ ಎಂದ ಕಾಂತಾರ ಚೆಲುವೆ ಸೋಶಿಯಲ್ ಮೀಡಿಯಾದಲ್ಲಿ  ಮನವಿ ಮಾಡಿದ್ದಾರೆ.

ಅನಾಮಿಕ ವ್ಯಕ್ತಿಯೋರ್ವ ನನ್ನ ಹೆಸರಿನಲ್ಲಿ ಹಣ ಕೇಳುತ್ತಿದ್ದಾನೆ, ಯಾರೂ ಆತನನ್ನು ನಂಬಿ ಹಣ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ನಟಿ ರುಕ್ಮಿಣಿ ವಸಂತ್ ”9445893273 ಸಂಖ್ಯೆಯನ್ನು ಬಳಸುವ ಒಬ್ಬ ವ್ಯಕ್ತಿಯು ನನ್ನಂತೆ ನಟಿಸಿ ಸುಳ್ಳು ನೆಪದಲ್ಲಿ ವಿವಿಧ ಜನರನ್ನು ತಲುಪುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಖ್ಯೆ ನನಗೆ ಸೇರಿಲ್ಲ ಮತ್ತು ಇದರಿಂದ ಬರುವ ಯಾವುದೇ ಸಂದೇಶಗಳು ಅಥವಾ ಕರೆಗಳು ಸಂಪೂರ್ಣವಾಗಿ ನಕಲಿ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ದಯವಿಟ್ಟು ಅಂತಹ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ . ಈ ಸೋಗು ಹಾಕುವ ಕೃತ್ಯವು ಸೈಬರ್ ಅಪರಾಧದ ವ್ಯಾಪ್ತಿಗೆ ಬರುತ್ತದೆ ಮತ್ತು ಅಂತಹ ವಂಚನೆ ಮತ್ತು ದಾರಿತಪ್ಪಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಸ್ಪಷ್ಟೀಕರಣ ಅಥವಾ ಪರಿಶೀಲನೆಗಾಗಿ, ನೀವು ನೇರವಾಗಿ ನನ್ನನ್ನು ಅಥವಾ ನನ್ನ ತಂಡವನ್ನು ಸಂಪರ್ಕಿಸಬಹುದು. ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಆನ್‌ಲೈನ್‌ನಲ್ಲಿ ಜಾಗರೂಕರಾಗಿರಿ ಮತ್ತು ಸುರಕ್ಷಿತವಾಗಿರಿ” ಎಂದು  ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read